You are currently browsing the category archive for the ‘Music’ category.
Reblogged from ಅಲ್ಲಿದೆ ನಮ್ಮ ಮನೆ:
The first time I came across the phrase 'graha bheda' was in a book called Sangeetha Darpana by Prof. Ramaratnam. For someone who exactly knew the aarohana and avarohana of three or four raagas, a detailed discussion of graha bheda, it's possibilities and limitations were too much to swallow. What? Getting Kalyani from Shankarabharana and todi?
Luckily, I had the luxury of having my grandma's old harmonium at my disposal.
ಕ್ಷೇಮಪುರದಲಿ ಇದ್ದನೊಬ್ಬನು ಶ್ರೀನಿವಾಸನ ನಾಮದಿ
ಹೇಮದಾಭರಣಗಳ ಮಾಡುತ ಮಾರಿ ಗಳಿಸುತ ನೆಮ್ಮದಿ
ನಾಮಮಾತ್ರಕು ದಾನವೆಂಬುದನಾತ ಸ್ವಲ್ಪವು ನೀಡದೆ
ನೇಮದಿಂದಲಿ ದುಡ್ಡುಮಾಡುವ ದಾರಿಯೊಂದನೆ ಕಂಡನು || ೧||
ಶ್ರೀನಿವಾಸನು ಸತ್ಯದಲಿ ಬೇರೆಲ್ಲ ವಿಷಯದಿ ಯೋಗ್ಯನು ||
ಗಾನವಿದ್ಯೆಯ ಪದ್ಧತಿಯಲಿ ಸಮಾನರಾರನು ಕಾಣೆನು
ಸಾನುರಾಗದಿ ಚಿಣ್ಣರಿಗೆ ಸಂಗೀತವಿದ್ಯೆಯ ಪೇಳ್ವನು
ಕಾನುಮಲೆಯ ಕ್ಷೇಮಪುರದಲ್ಲವನೆ ಬಲುಸಿರಿವಂತನು ||೨||
ಶ್ರೀನಿವಾಸನ ಮಡದಿ ಸರಸತಿ ಸಾಧ್ವಿಯವಳು ನಿಚ್ಚದಿ
ಮಾನಿನಿಯು ತಾನೆಂದು ಗಂಡನ ಮಾತ ಮೀರಲು ಹೋಗಳು
ತಾನು ಮಾಡಿದ ಭಾಗ್ಯ ತನ್ನಯ ಗಂಡ ಮಕ್ಕಳ ಕಾವುದು
ಏನೊ ಎಂತೋ ದೈವ ನೀಡಿದುದಲ್ಲೆ ಶಾಂತಿಯ ಕಾಂಬಳು ||೩||
ಒಂದು ಶ್ರಾವಣ ತಂಪು ಹಗಲಲಿ ಶ್ರೀನಿವಾಸನ ಮಳಿಗೆಗೆ
ಬಂದು ನಿಂತನು ವೃದ್ಧ ಬ್ರಾಹ್ಮಣನೊಬ್ಬ ಬೇಡುತ ಹಣವನು
ಕಂದ ಮೊಮ್ಮೊಗನಿಹನು ಮನೆಯಲಿ ಮಾಡಬೇಕಿದೆ ಮುಂಜಿಯ
ಒಂದು ಹೊನ್ನನು ಕೊಟ್ಟರಾಯಿತು ಧನ್ಯನಾಗುವೆ ಎಂದನು ||೪||
ಎಂದು ದಾನವ ಮಾಡದಂತಹ ಶ್ರೀನಿವಾಸನು ಯೋಚಿಸಿ
ಇಂದು ಈತನ ಸಾಗಿಹಾಕಿದರಾಯಿತೆನ್ನುತ ಭಾವಿಸಿ
ಮುಂದೆ ಬಾಗಿಲಿನಿಂದ ಆಚೆಯೆ ವೃದ್ಧನಾತನ ಕಳುಹಿಸಿ
ಬಂದು ನೋಡೆಲೆ ವಾರವಾಗಲಿ ಆಗ ಕೊಡಬಹುದೆಂದನು ||೫||
ಹೀಗೆ ವಾರವು ಮತ್ತೆ ವಾರವು ತಿಂಗಳುಗಳೇ ಸಂದವು
ಯೋಗಿಯಂದದಿ ಮುದುಕ ಹಾರುವ ಬೇಸರಿಲ್ಲದೆ ಬರುವನು
ಬಾಗಿ ನಿಲ್ಲುವ ಮತ್ತೆ ಬೇಡುತ ಒಂದು ಹೊನ್ನಿನ ಕಾಸನು
ರೇಗು ಹತ್ತಿದ ಶ್ರೀನಿವಾಸನು ಕಿಲುಬು ನಾಣ್ಯವ ಕೊಟ್ಟನು ||೬||
ಕೆಟ್ಟ ನಾಣ್ಯವ ಕೊಟ್ಟರೂ ಅವ ಕೈಯ ಮುಗಿಯುತ ಹೊರಟನು
ಕೆಟ್ಟು ಹೋಗಿರೆ ಹಣೆಯ ಬರಹವು ಹೊಣೆಯು ಯಾರದಕೆಂದನು
ಪಟ್ಟು ಬಿಡದಿರುವುದೊಳಿತೆಂದವ ಮನದಿ ಯೋಚನೆ ಮಾಡುತ
ನೆಟ್ಟ ನೇರದಿ ಹೋಗಿ ಸರಸತಿ ಮನೆಯ ಬಾಗಿಲ ಬಡಿದನು ||೭||
ತಂದೆಯಂತಿಹ ಮುದುಕ ಹೇಳಿದ ಕಥೆಯ ಸರಸತಿ ಕೇಳಿ ತಾ
ನೊಂದು ನವೆಯುತ ಏನ ತಾನೇ ಮಾಡಬಲ್ಲೇನೆಂದಿರೆ
ತಂದೆ ತಾಯಿಯು ಕೊಟ್ಟ ಮುತ್ತಿನ ನತ್ತು ನೆನಪಿಗೆ ಬಂದಿತು
ಚೆಂದವಾಗಿರುವೊಡವೆಯೊಂದಿದೆ ಕೊಳ್ಳಿರೀಗಲೆ ಎಂದಳು ||೮||
ತರುಣಿ ಕೊಟ್ಟಿಹ ಹೊಳೆವ ಮೂಗುತಿ ನೋಡಿ ಹಿಗ್ಗಿದ ಬ್ರಾಹ್ಮಣ
ಸಿರಿನಿವಾಸನ ಬಳಿಗೆ ವೇಗದಿ ಧಾವಿಸುತ್ತಲೆ ಹೋದನು
ಇರುಳ ದೀಪದ ಸೊಬಗಿನಾಮುತ್ತಿಹುದು ನನ್ನಲಿ ನೋಡಿರಿ
ಸರಿಯ ಬೆಲೆಯನು ನೀವೆ ಕಟ್ಟಿರಿ ಹಣವ ನೀಡಿರಿ ಎಂದನು ||೯||
ಹೊಳೆವ ಮೂಗುತಿ ಸೊಬಗ ಕಂಡು ಶಂಕೆಗೊಂಡನು ನಾಯಕ
ಬೆಳಕಿನಾ ಖನಿಯಿದನು ಕಂಡಿಹೆ ಮೊದಲೆ ತಾನೆಂದೆನಿಸಲು
ಹೊಳೆಯಿತವನಿಗೆ ಮಡದಿ ಸರಸತಿ ಹಾಕಿಕೊಳ್ಳುವ ಮೂಗುತಿ
ಸೆಳೆದು ತಂದಿಹನೇನೊ ಎನ್ನುವ ಭಯವು ಕಾಡಿತು ಮನಸಲಿ ||೧೦||
ಮಡದಿ ಸರಸತಿ ಏನು ಮಾಡಿದಳೆಂದು ಅರಿಯುವ ಕಾರಣ
ಒಡನೆ ಎದ್ದು ಹೊರಟ ಮನೆಕಡೆ ಶ್ರೀನಿವಾಸ ನಾಯಕ
ಕೊಡುವೆ ಹಣವನು ಹೊರಗೆ ಕುಳ್ಳಿರು ಬೇಗ ಮರಳುವೆ ಎನ್ನುತ
ಹಿಡಿದ ನತ್ತನು ಪೆಟ್ಟಿಗೆಯಲೇ ಇಟ್ಟು ಬೀಗವ ಹಾಕಿದ || ೧೧||
ಮಳಿಗೆ ಹಿಂದಿನ ಕೋಣೆಯಲ್ಲಿ ಇದ್ದ ಬಾಲಕ ಮಧ್ವಪ
ಕುಳಿತು ಚಿತ್ರವ ಬಿಡಿಸುತಿದ್ದವ ಅಪ್ಪ ಹೋದುದ ಕಾಣುತ
ಒಳಗಿನಿಂದ ಹೊರಗೆ ಬಂದು ನೋಡಿ ಮುಚ್ಚಿದ ಪೆಟ್ಟಿಗೆ
ಒಳಗೆ ನೋಡುವೆನೆಂದು ಬೀಗವ ತೆರೆಯೆ ಮೂಗುತಿ ಕಂಡಿತು ||೧೨||
ಅರರೆ ಅಮ್ಮನ ಮೂಗುತಿಯಿದು ಇಲ್ಲಿಗೇತಕೆ ಬಂದಿತು?
ಮುರಿದು ಹೋದುದೆ? ಸರಿಗೆ ಕಡಿದುದೆ? ಇಲ್ಲ ಬಣ್ಣವು ಕೆಟ್ಟುದೆ?
ಇರುವ ವಿಷಯವದೇನೋ ತಿಳಿಯದು ಮುದುಕನೇನಿದ ತಂದನು?
ಸರಿಯಿದನ್ನು ನೋಡಿ ತಂದೆಯದೇಕೆ ಮನೆಕಡೆ ನಡೆದನು? ||೧೩||
ಅತ್ತ ನಾಯಕ ಮನೆಗೆ ಹೋಗಿ ಬಳಿಗೆ ಮಡದಿಯ ಕರೆಯುತ
ಮುತ್ತು ಮೂಗುತಿ ಕಾಣದೆಲ್ಲಿಗೆ ಹೋಯಿತೆನ್ನುತ ಕೇಳಲು
ಎತ್ತಿ ಇಟ್ಟಿಹೆ ತಂದು ತೋರುವೆನೆಂದು ನುಡಿದೊಳಹೋದಳು;
ಇತ್ತ ಕಡೆಯಲಿ ಬಾಲಕನು ಭಯದಿಂದ ಮನೆಗೋಡುತಲಿರ್ದನು ||೧೪ ||
ನುಡಿದೆ ಹುಸಿಯನು ಗಂಡನಲಿ ನಾನೆಂತು ಮೂಗುತಿ ತೋರಲಿ?
ಬಿಡದೆ ನಿನ್ನಯ ಪಾದವೆಂದಿಗು ನಂಬಿದವಳನು ಪಾಲಿಸೋ
ಕಡುಪರೀಕ್ಷೆಯ ಸಮಯ ಬಂದಿದೆ ನೀನೆ ದಾರಿಯ ತೋರ್ವುದು
ಎಡದ ಹೂವಲಿ ಪ್ರಾಣ ನೀಗುವೆ ಬಲದಿ ಕೊಟ್ಟರೆ ಬಾಳುವೆ ||೧೫||
ಹೀಗೆ ನೆನೆಯುತ ಸರಸತಿಯು ತಾ ಹೂವನಿಟ್ಟಳು ವಿಠಲಗೆ
ಬೇಗ ಬಾರೆನ್ನುತಲಿ ಹೊರಗಡೆ ಪತಿಯು ಕೂಗುತಲಿದ್ದಿರೆ
ಆಗಬಾರದುದೇನೊ ನಡೆಯುವ ಭಯವು ಹೆಚ್ಚುತ ಹೋಗುತ
ಹೇಗೊ ದಾರಿಯ ಓಡಿ ಮುಗಿಸಿದ ಹುಡುಗ ಮನೆಬಳಿ ಬಂದನು ||೧೬||
ಹೊರಗಡೆಯಲೇ ಅಪ್ಪ ನಿಂತಿಹ ಮುಖದಲೇನೋ ಕೋಪವು
ಮರುಳುಗೆಟ್ಟನೊ? ಕನಸ ಕಂಡನೊ? ಏಕೆ ಈಪರಿ ನೋಟವು?
ಇರಲಿ ಮೊದಲಿಗೆ ತಾಯ ಕಾಣುವೆ ಮತ್ತೆ ಮೂಗುತಿ ನೀಡುವೆ
ಸರಸರನೆ ಹೀಗೆನಿಸಿ ಮಧ್ವಪ ಮನೆಯ ಪಕ್ಕದಿ ಓಡಿದ ||೧೭||
ಮುಚ್ಚಿರುವಕಂಗಳನು ಸರಸತಿ ಕೈಯ ಮುಗಿದೇ ತೆರೆಯಲು
ನಿಚ್ಚದಲಿ ಬಿದ್ದಿತ್ತು ಎಡಗಡೆಯಿಂದಲೊಂದು ಕುಸುಮವು
ಅಚ್ಚಕೆಂಪನೆ ಹೂವದನ್ನು ನೋಡಿ ಕಸಿವಿಸಿಗೊಳ್ಳುತ
ಪಚ್ಚೆವಜ್ರದ ಕಿವಿಯ ಓಲೆಯ ತೆಗೆದು ಪುಡಿಪುಡಿಗೈದಳು ||೧೮||
ಹಿಂದುಗಡೆಯಲಿ ಓಡುವಾಗಲೆ ಕಿಟಕಿಯಲ್ಲೇ ಕಂಡಿತು
ಮಂಗಳದ ಕುರುಹಲ್ಲ ತಾಯಿಯ ಕಣ್ಣ ತುಂಬಿದ ಹನಿಗಳು
ನುಂಗಹೊರಟಿಹಳೇನೊ ಕಾಣದು ಬಾಲಕನು ಭಯಗೊಳ್ಳುತ
ಮುಂದಕೇನೂ ತೋರದೇ ಅವ ನತ್ತು ಕಿಟಕಿಯೊಳೆಸೆದನು ||೧೯||
ಕಣ್ಣ ಮುಚ್ಚಿ ವಿಷವ ಸೇವಿಸ ಹೊರಟ ಸರಸತಿ ಬೆಚ್ಚುತ
ಕಣ್ಣ ಬಿಟ್ಟಳು ಏನೋ ಬಿದ್ದಿರಲಾಗ ಕೈಯಲಿ ಒಮ್ಮೆಗೆ
ಕಣ್ಣನೇ ತಾ ನಂಬಲಾರಳು ಕೈಯಲಿರುವುದು ಮೂಗುತಿ
ಬಣ್ಣಗೆಟ್ಟಿಹ ಅವಳ ಮೊಗದಲಿ ಮತ್ತೆ ಮರಳಿತು ಜೀವವು || ೨೦||
ಏನು ಯೋಚಿಸದೇನೆ ಸರಸತಿ ಹೋಗಿ ಹೊರಗಡೆ ಗಂಡಗೆ
ತಾನು ಕೈಯಲಿ ಹಿಡಿದ ಮೂಗುತಿ ಮಾತನಾಡದೆ ಕೊಟ್ಟಳು
ಏನಿಹುದವಳೆಡಗೈಲಿ ಬಟ್ಟಲು ಕಿವಿಯ ವಜ್ರವು ಕಾಣದೇ
ತಾನೆ ವಿಷಯವ ಅರಿತು ಬಟ್ಟಲ ವಿಷವ ನೆಲದಲಿ ಚೆಲ್ಲಿದ ||೨೧||
ನಡೆದ ನಾಯಕ ಅದೇ ನಿಮಿಷದಿ ಬೇಗ ತನ್ನಯ ಮಳಿಗೆಗೆ
ಅಡಗಿ ಹೋಗಿತ್ತವನ ಮನದಲಿ ಬೀಡು ಬಿಟ್ಟಿಹ ಕೃಪಣತೆ
ಉಡುಗಿ ಹೋಗುವುದಿತ್ತು ಒಂದೂ ತಪ್ಪುಮಾಡದ ಜೀವವು!
ಮಡದಿಗಿಂತಲು ಮಿಗಿಲು ಆಪುದೆ ಬರಿಯ ಧನಕನಕಾದಿಯು? ||೨೨||
ಶ್ರೀನಿವಾಸನು ಕಾಣಲಿಲ್ಲ ಅಂಗಡಿಯಲಿ ಮುದುಕನ
ಏನುಮಾಡಲು ಬೇಕು ಎಂಬುದನಾಗ ಮನದಲಿ ಯೋಚಿಸಿ
ತಾನೆ ಕೂಡಲೆ ಮಾಡಿಬಿಟ್ಟನು ಹಿರಿಯದೊಂದು ಮುಡಿವನು
ದಾನ ಮಾಡುವೆ ದಾಸನಾಗುವೆ ವಿಜಯನಗರವ ಸೇರುವೆ ||೨೩||
ಮನೆಗೆ ಮರಳಿದ ಶ್ರೀನಿವಾಸನು ಮುಡಿವ ಮಡದಿಗೆ ಹೇಳಿದ
ತನಗೆ ಭಾಗ್ಯವದಾಯಿತೆನ್ನುತ ಸರಸತಿಯು ಮರು ನುಡಿದಳು
ಜನವ ಕರೆಯುತ ಸಕಲ ಸಿರಿಯನು ಅಲ್ಲೆ ದಾನವ ಮಾಡುತ
ಮನೆಮಠಗಳನು ತೊರೆದು ಹೆಂಡತಿ ಮಕ್ಕಳೊಟ್ಟಿಗೆ ಹೊರಟರು ||೨೪||
ಹೋದ ದಿನಗಳ ಮರೆತು ಬಿಟ್ಟರು ಮತ್ತೆ ದಂಡಿಗೆ* ಹಿಡಿದರು
ವೇದ ವೇದ್ಯನ ಭಾವ ಗಮ್ಯನ ನಾಮ ಸಾಸಿರ ನುಡಿಯುತ
ಆದರದಿ ದಾಸನೆನಿಸುತ್ತಲಿ ಪುರಂದರನಾ ಹೆಸರಲಿ
ಆದುದೆಲ್ಲಾ ಒಳಿತೆ* ಎನ್ನುತ ರಾಮಕ್ರಿಯೆ*ಯಲಿ ಪಾಡುತ || ೨೫||
-neelanjana
*******************************************
p.s: This is the verse form of a story I wrote about Purandara Dasa’s transformation becoming a Haridasa from his previous life as a merchant. If you are interested in reading it in prose form, the story can be read here in Kannada or here, in English
p.p.s: It is written in the form of a choupadi – a four liner meter, which has been very successfully used in Kannada for story telling. The unforgettable “Govina Hadu” comes to mind. In the form that I have chosen, each line confirms to 3/4/3/4/3/4/4(5) mAtres
p.p.p.s: The first stanza refers to the town where Purandaradasa (or Srinivasa Nayaka, before he became a Haridasa hail) came from. Kshemapura, in the Sharavati valley is identified as the most likely place where he would have spent his life as a businessman. The last stanza refers to a composition of Purandara Dasa “Adaddella oLite Ayitu” that is supposedly an autobiographical, where he praises his wife as being instrumental in making him a Haridasa. This song is traditionally sung in rAga “Ramakriya” (now better known as Kamavardhini, and somewhat incorrectly as “Pantuvarali”
Today is the fifth day of the day dark half of the lunar month of Pushya. This is the day Tyagaraja passed away in the year 1847. Since I started blogging, I have been making a post on this day. Not to break this tradition here I am with two chaupadis (four-liners) in Kannada, that I wrote today:
ಐದುಹೊಳೆಯೂರಿನಲಿ ಇದ್ದನವ ಮಹನೀಯ
ಹೆಸರವನದಾಗಿತ್ತು ತ್ಯಾಗರಾಜ;
ಬಗೆಬಗೆಯ ರಾಗದಲಿ ನೂರಾರು ರಚನೆಗಳ
ಮಾಡಿ ಇತ್ತಿಹನೆಮಗೆ ಯೋಗಿ ರಾಜ!
ತ್ಯಾಗರಾಜ ವಿರಾಗಿಯೇಕಾದೆ ಹೇಳು ನೀ
ನಾಗಿರಲು ರಸಿಕ ಮನವಾಳ್ವ ರಾಜ;
ಭೋಗಗಳ ಬೇಡೆನುತ ನಿಲೆನಿಂತೆ ಹಾಡುತ್ತ
ರಾಗಗಳ ನೀ ನಿಜದಿ ರಾಗ ರಾಜ!
(ಐದುಹೊಳೆಯೂರು = Literally, “the town of five rivers” – Tiruvaiyyaru, where Tyagaraja lived)
Here are links to posts I wrote in previous years around this time:
-neelanajana
I figure it is better to post the this video of Navaratri celebration at our home – since Deepavali is around the corner already!












Recent Comments